Saturday, June 28, 2025
spot_imgspot_img
spot_imgspot_img

ಉಡುಪಿ: ವೇಶ್ಯಾವಾಟಿಕೆ ದಂಧೆಗೆ ಪೊಲೀಸ್‌ ದಾಳಿ; ಓರ್ವ ಯುವತಿಯ ರಕ್ಷಣೆ..!

- Advertisement -
- Advertisement -

ಉಡುಪಿ: ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಹಿತಿಯ ಮೇರೆಗೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಶಾರದಾ ನಗರದಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

ಸತೀಶ್ ಎಂಬಾತ ಸಂತ್ರಸ್ಥೆಗೆ ಕೆಲಸ ಕೊಡುವುದಾಗಿ ಪುಸಲಾಯಿಸಿ ಮೂಡಬಿದ್ರೆಯಿಂದ ಶಾರದ ನಗರದಲ್ಲಿರುವ ಶ್ರೀಲತಾ ಎಂಬವರ ಮನೆಗೆ ಕಳುಹಿಸಿದ್ದನು.ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆ ಚಟುವಟಿಕೆ ಮಾಡುವಂತೆ ಒತ್ತಾಯಿಸಿ, ಒಂದು ಕೋಣೆಯಲ್ಲಿ ಕೂಡಿ ಹಾಕಿದ್ದಳು ಎನ್ನಲಾಗಿದೆ.

ಆರೋಪಿಗಳು ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಿ ಹಣ ಸಂಪಾದಿಸುವ ಉದ್ದೇಶದಿಂದ ಆಕೆಯನ್ನು ಒತ್ತಾಯ ಪೂರ್ವಕವಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಸಂತ್ರಸ್ಥೆಯನ್ನು ರಕ್ಷಿಸಿದರು. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!