Saturday, June 28, 2025
spot_imgspot_img
spot_imgspot_img

ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನ ಡಿಕ್ಕಿ; ತಂದೆ ಮಗಳು ಗಂಭೀರ

- Advertisement -
- Advertisement -

ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಟೈಗರ್ ಸರ್ಕಲ್ ಬಳಿ ನಡೆದಿದೆ.

ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್ ಪರ್ಕಳ ಕಡೆ ಹೋಗುತ್ತಿದ್ದ ಟಿವಿಎಸ್ ಮೊಪೆಡ್‌ಗೆ ಟೈಗರ್ ಸರ್ಕಲ್ ಬಳಿ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಅಂಜಾರುವ ಕಾಜಾರಗುತ್ತು ನಿವಾಸಿ ರಮೇಶ ಪ್ರಭು (69) ಹಾಗೂ ಸಹಸವಾರೆ ಅವರ ಮಗಳು ಶ್ರೀದೇವಿ ಪ್ರಭು(42) ಗಾಯಗೊಂಡವರು. ಗಾಯಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲು ಮಾಡಿದ್ದಾರೆ.

- Advertisement -

Related news

error: Content is protected !!