


ಉಡುಪಿ: ಬಸ್ ಚಾಲಕನೊಬ್ಬ ಅಪಾಯಕಾರಿ ಅಜಾಗರೂಕತೆಯ ಚಾಲನೆಯಿಂದ ವಾಹನ ಚಲಾಯಿಸಿ ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿರುವ ವಿಡಿಯೋ ಜೂನ್ 17ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಉಡುಪಿ ಸಂಚಾರ ಪೊಲೀಸರು ತನಿಖೆ ನಡೆಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆರೋಪಿ ಚಾಲಕನನ್ನು ದೇವರಾಜ್ ಎಂದು ಗುರುತಿಸಲಾಗಿದೆ.
ಇವರು ಶ್ರೀ ದುರ್ಗಾಂಬಾ ಬಸ್ ಅನ್ನು ಎನ್ಎಚ್ 169ಎ ಸಾರ್ವಜನಿಕ ರಸ್ತೆಯ ಮೂಲಕ ಉಡುಪಿ ಮಾರ್ಗದಲ್ಲಿ ಚಲಾಯಿಸುತ್ತಿದ್ದರು. ಕರಾವಳಿ ಕಡೆಯಿಂದ ಉಡುಪಿಯ ಕಡೆಗೆ ಚಲಿಸುವಾಗ, ಇವರು ಅಜಾಗರೂಕ ಮತ್ತು ನಿರ್ಲಕ್ಷ್ಯದ ರೀತಿಯಲ್ಲಿ ವಾಹನ ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ ನಿಯಂತ್ರಣ ಕಳೆದುಕೊಂಡು ಬನ್ನಂಜೆಯ ಬಳಿ ದಿಢೀರನೆ ಪಕ್ಕಕ್ಕೆ ಸರಿದು ಅಪಾಯಕಾರಿ ರೀತಿಯಲ್ಲಿ ನಿಂತಿದೆ ಎಂದು ವರದಿಯಾಗಿದೆ. ನಂತರ, ಚಾಲಕ ಬಸ್ ಅನ್ನು ಉಡುಪಿಯ ಕಡೆಗೆ ತಪ್ಪಾದ ದಿಕ್ಕಿನಲ್ಲಿ ಚಲಾಯಿಸಿದ್ದಾನೆ ಎನ್ನಲಾಗಿದೆ. ಅದೃಷ್ಟವಶಾತ್, ಬಸ್ನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಲಾಗಿದ್ದು, ಬಸ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.