- Advertisement -
- Advertisement -
ಉಡುಪಿ: ಟೆಂಪೋ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶಿರ್ವದ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಟಪಾಡಿ ಕೋಟೆ ನಿವಾಸಿ ಶ್ರೀನಿವಾಸ್ ರಾವ್ (50) ಎಂದು ಗುರುತಿಸಲಾಗಿದೆ.
ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ ಹೋಗುತ್ತಿದ್ದ ಬೈಕ್ ಸವಾರರ ಮಧ್ಯೆ ಭೀಕರ ಅಪಘಾತ ನಡೆದಿದೆ. ಶಿರ್ವ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -