Tuesday, July 21, 2026
spot_imgspot_img
spot_imgspot_img

ಉಡುಪಿ: ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್, ಬಸ್‌ಗಳಿಗೆ ಬಾಗಿಲು ಕಡ್ಡಾಯ: ಎಸ್ಪಿ ಆದೇಶ

- Advertisement -
- Advertisement -

ಉಡುಪಿ : ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವಾಹನಗಳಿಗೆ 60ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್ ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ.

ಈ ವಾಹನಗಳು ಅತಿಯಾದ ವೇಗ ಹಾಗೂ ನಿರ್ಲಕ್ಷತನದ ಚಾಲನೆಯಿಂದ ನಿರಂತರ ವಾಗಿ ಅಪಘಾತಗಳು ಸಂಭವಿಸುತ್ತಿದ್ದು, ಆದುದರಿಂದ ಇತ್ತೀಚೆಗೆ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಈ ನಿಯಮ ಪಾಲನೆಗಾಗಿ ಎಲ್ಲಾ ಲಾರಿ ಚಾಲಕ ಮಾಲಕರಿಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ವಿಚಾರವಾಗಿ ಚಾಲಕರಿಗೆ ಯಾವುದೇ ಮಾಹಿತಿ ಕೊರತೆಯಾಗದಂತೆ ಜಾಗೃತಿ ಮೂಡಿಸಲು ಮುಂದಿನ ದಿನಗಳಲ್ಲಿ ಕರಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

- Advertisement -

Related news

error: Content is protected !!