Friday, July 24, 2026
spot_imgspot_img
spot_imgspot_img

ಉಡುಪಿ: ಖನಿಜ ಸಾಗಾಟದ 163 ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಕೆ…

- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಜ.14ರಂದು ಕಲ್ಲು-ಮಣ್ಣು-ಜಲ್ಲಿ-ಮರಳುಗಳನ್ನು ಸಾಗಿಸುವ ವಾಹನಗಳ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 832 ವಾಹನಗಳನ್ನು ಪರಿಶೀಲಿಸಲಾಗಿದ್ದು, 182 ವಾಹನಗಳಿಗೆ ನೋಟಿಸ್‌ ನೀಡಲಾಗಿದೆ. ಅಧಿಕ ಭಾರ ಹಾಗೂ ಇತರೆ ಅಪರಾಧಗಳಿಗಾಗಿ 66 ವಾಹನಗಳ ಮೇಲೆ ಸ್ಥಳದಲ್ಲಿ ದಂಡ ಹಾಕಿ 22,500ರೂ. ಹಣ ವಸೂಲಿ ಮಾಡಲಾಗಿದೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಒಂದು ವಾಹನದ ಮೇಲೆ ಪ್ರಕರಣ ದಾಖಲು ಮಾಡಲಾಗಿದ್ದು, 27 ವಾಹನಗಳನ್ನು ಗಣಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ(ಜ.8ರಿಂದ ಜ.14ರವರೆಗೆ) ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸುವ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಕರಪತ್ರ ಹಂಚುವ ಮೂಲಕ ಮಾಹಿತಿಯನ್ನು ನೀಡಲಾಗುತ್ತಿತ್ತು. ಈ ವೇಳೆ ಒಟ್ಟು 1240 ಕರಪತ್ರಗಳನ್ನು ಹಂಚಲಾಗಿದ್ದು, ಈಗಾಗಲೇ 163 ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!