Saturday, June 28, 2025
spot_imgspot_img
spot_imgspot_img

ಉಡುಪಿ: ವಿಶ್ವಕಪ್ ಜಯದ ಬೆನ್ನಲ್ಲೇ ಕಾಪು ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ ಸೂರ್ಯಕುಮಾರ್ ಯಾದವ್ ದಂಪತಿ..!

- Advertisement -
- Advertisement -

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಕಾಪುವಿಗೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದರು.

ದೇಗುಲದ ಅಧಿಕಾರಿಗಳ ಪ್ರಕಾರ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದವರಾದ ದೇವಿಶಾ ಶೆಟ್ಟಿ, ಭಾರತ ಟಿ20 ವಿಶ್ವಕಪ್ ಗೆದ್ದರೆ ಪತಿಯೊಂದಿಗೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಹರಕೆ ಹೊತ್ತಿದ್ದರಂತೆ. ಹೀಗಾಗಿ ದೇಗುಲಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮ ದೇವಿಗೆ ಮಲ್ಲಿಗೆ ಹೂವಿನ ಮಾಲೆಯನ್ನು ಅರ್ಪಿಸಿ ಅವರ ಕುಟುಂಬಕ್ಕೆ ಆಶೀರ್ವಾದ ಕೋರಿದರು.

ಅಂತೆಯೇ ಸೋಮವಾರ ಮಂಗಳೂರಿಗೆ ಬಂದಿಳಿದ ಯಾದವ್ ಮತ್ತು ಶೆಟ್ಟಿ ವಿಮಾನ ನಿಲ್ದಾಣದಲ್ಲಿ ಕೇಕ್ ಕತ್ತರಿಸುವ ಮೂಲಕ ಎಂಟನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು.

ಶೆಟ್ಟಿ ಅವರು ದೇವಸ್ಥಾನದಲ್ಲಿ ತುಳುವಿನಲ್ಲಿ ಮಾತನಾಡುತ್ತಿರುವುದು ಕಂಡುಬಂದಿತು. ಯಾದವ್ ಕೂಡ ತುಳುವಿನಲ್ಲಿ ಮಾತನಾಡಲು ಯತ್ನಿಸಿದ್ದು ದೇವಸ್ಥಾನದ ಅಧಿಕಾರಿಗಳಲ್ಲಿ ಅಚ್ಚರಿ ಮೂಡಿಸಿದೆ. ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ 10 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಒಟ್ಟು 199 ರನ್ ಬಾರಿಸಿದ್ದರು. ಅದರಲ್ಲೂ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿತ್ತು. ಈ ಸಂಭ್ರಮದ ನಡುವೆ ಸೂರ್ಯಕುಮಾರ್ ಉಡುಪಿಗೆ ಬಂದು ತಮ್ಮ ಹರಕೆ ತೀರಿಸಿರುವುದು ವಿಶೇಷವಾಗಿದೆ.

- Advertisement -

Related news

error: Content is protected !!