Sunday, June 21, 2026
spot_imgspot_img
spot_imgspot_img

ಉಡುಪಿ: ಅಂಗಡಿಗೆ ನುಗ್ಗಿದ ಕಳ್ಳರು – 20 ಸಾವಿರ ರೂ. ನಗದು, ಚಾಕಲೇಟ್ ದೋಚಿ ಪರಾರಿ..!

- Advertisement -
- Advertisement -

ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್‌ಗಳನ್ನು ಕಳವು ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಇಬ್ಬರು ಕಳ್ಳರ ಈ ಕರಾಮತ್ತು ಅಂಗಡಿಯೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಕ್ಯಾಶ್ ಕೌಂಟರ್ ನಲ್ಲಿರಿಸಿದ್ದ 20 ಸಾವಿರ ರೂ. ನಗದು ಕಳವುಗೈದ ಕಳ್ಳರು ಅನಂತರ ಚಾಕಲೇಟ್ ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಅಲ್ಲದೇ ಬ್ರೆಶ್ ಸಹಿತ ಕೆಲವೊಂದು ವಸ್ತುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!