Saturday, June 28, 2025
spot_imgspot_img
spot_imgspot_img

ಉಡುಪಿ: ಟಯರ್‌ಗೆ ಗಾಳಿ ತುಂಬಿಸುವ ವೇಳೆ ಸ್ಪೋಟ; ಯುವಕನಿಗೆ ಗಾಯ..!

- Advertisement -
- Advertisement -

ಉಡುಪಿ: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡು ಯುವಕ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ.

ಗಾಯಗೊಂಡ ಯುವಕನನ್ನು ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ.

ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿನ ಟಯರ್ ಪಂಚರ್ ಶಾಪ್‌ನಲ್ಲಿ ಬಸ್‌‌ನ ಟೈಯರಿಗೆ ಗಾಳಿ ತುಂಬುವ ಸಂದರ್ಭ
ಟಯರ್ ಸಿಡಿದಿದೆ.

ಖಾಸಗಿ ಶಾಲೆ ಬಸೊಂದರ ಟಯರ್ ಪ್ಯಾಚ್‌ಗೆಂದು ಬಂದಿದ್ದು, ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯರ್ ಸಿಡಿದಿದೆ. ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟ ಸಂಭವಿಸಿದ್ದು, ಟಯರ್‌ನ ಸಿಡಿತಕ್ಕೆ ಸುಮಾರು ಕೆಲವು ಅಡಿ ಎತ್ತರಕ್ಕೆ ಯುವಕ ಎಸೆಯಲ್ಪಟ್ಟಿದ್ದಾನೆ.

ಅಪಘಾತದ ಹೊಡೆತಕ್ಕೆ ಯುವಕನ ಕೈ ಮುರಿತ ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

Related news

error: Content is protected !!