Saturday, June 28, 2025
spot_imgspot_img
spot_imgspot_img

ಉಡುಪಿ: ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಉಡುಪಿ: ಮನನೊಂದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನ ಮರ್ಣೆ ಎಂಬಲ್ಲಿ ನಡೆದಿದೆ.

ಮಣಿಪಾಲದ ಮರ್ಣೆ ನಿವಾಸಿ 41 ವರ್ಷದ ಸಂತೋಷ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮರದ ಕೆಲಸ ಮಾಡುತ್ತಿದ್ದು, ಕೆಲಸದ ಮೂಲಕ ಹೆಚ್ಚು ಜನಮನ್ನಣೆ ಗಳಿಸಿದ್ದರು. ಮನೆಯವರೆಲ್ಲರು ಆರತಕ್ಷತೆ ಕಾರ್ಯಕ್ರಮ ಹೋಗಿದ್ದರು. ಈ ವೇಳೆ ಸಂತೋಷ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಸಾಗಿಸಲು ನೆರವಾದರು.

- Advertisement -

Related news

error: Content is protected !!