Saturday, June 28, 2025
spot_imgspot_img
spot_imgspot_img

ಉಜಿರೆ: ಖಾಸಗಿ ಲಾಡ್ಜ್‌ವೊಂದರಲ್ಲಿ ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಉಜಿರೆ: ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾವಂತೂರು ಲಾಡ್ಜ್‌ನಲ್ಲಿ ನಡೆದಿದೆ.

ಶಿವಮೊಗ್ಗ ನಿವಾಸಿ ಅವಿವಾಹಿತ ಯುವಕ ಕಾರ್ತಿಕ್ (29) ಜೂನ್ 26 ರಂದು ಖಾಸಗಿ ಲಾಡ್ಜ್‌ನಲ್ಲಿ ರೂಂ ಪಡೆದುಕೊಂಡು ಉಳಿದುಕೊಂಡಿದ್ದರು. ಜೂನ್ 28 ರಂದು ರೂಂ ಒಳಗೆ ಹಗ್ಗವನ್ನು ಫ್ಯಾನ್‌ಗೆ ಹಾಕಿ ಪ್ಲಾಸ್ಟಿಕ್ ಕುರ್ಚಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್ 29 ರಂದು ಸಿಬ್ಬಂದಿಗಳು ಬಾಗಿಲು ಬಡಿದರೂ ಕಾರ್ತಿಕ್ ರೂಂ ನಿಂದ ಹೊರಬಾರದೆ ಇದ್ದಾಗ, ಅನುಮಾನದಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್ ಮತ್ತು ತಂಡ ರೂಂನ ಬಾಗಿಲು ಮುರಿದು ಒಳಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಪರಿಶೀಲನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಮನೆಯ ವಿಳಾಸ ಪತ್ತೆಯಾಗಿದ್ದು ಮನೆಯವರನ್ನು ಸಂಪರ್ಕಿಸಲಾಗಿದೆ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಅದರೆ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!