ವಿಟ್ಲ: ಉಕ್ಕುಡ ಪಬ್ಲಿಕ್ ಸ್ಕೂಲ್ ಇದರ ನೂತನ ಕಛೇರಿಯನ್ನು ಬುಧವಾರ (30/09) ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಾಬು ಕೆ.ವಿ. ಅವರು ಉದ್ಘಾಟಿಸಿದರು. ಇದಕ್ಕೂ ಮೊದಲು ಉಕ್ಕುಡ ಜುಮಾ ಮಸೀದಿ ಮುದರ್ರಿಸ್ ಅಹ್ಮದ್ ಶರೀಫ್ ಸಖಾಫಿ ಹಾಗೂ ಸದರ್ ಮುಅಲ್ಲಿಮ್ ಅಬ್ದುಲ್ ಹಮೀದ್ ಮದನಿ ದುವಾ ಪ್ರಾರ್ಥನೆ ನೆರವೇರಿಸಿ ಶುಭ ಹಾರೈಸಿದರು.
ಕಛೇರಿಯ ಮುಖ್ಯೋಪಾಧ್ಯಾಯರ ಕೊಠಡಿಯನ್ನು ಮಂಗಳೂರು ಎಂ.ಫ್ರೆಂಡ್ಸ್ ಎನ್ನಾರೈ ಸದಸ್ಯರಾದ ಅಬೂಬಕರ್ ಸಿದ್ದೀಕ್ ಮಸ್ಕತ್ ಅವರು ಉದ್ಘಾಟಿಸಿದರು. ಉಕ್ಕುಡ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾದ ರಶೀದ್ ವಿಟ್ಲ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕೆ.ಎಸ್. ಹಮೀದ್ ವಿಟ್ಲ, ಶಾಲೆಯ ಮಾಜಿ ಅಧ್ಯಕ್ಷರಾದ ಹಮೀದ್ ಟಿ.ಎಚ್.ಎಂ.ಎ., ಉಕ್ಕುಡ ಬದ್ರಿಯಾ ಜುಮಾ ಮಸೀದಿ ಕಾರ್ಯದರ್ಶಿ ಶರೀಫ್ ತೈಬಾ ಮುಖ್ಯ ಅತಿಥಿಯಾಗಿದ್ದರು.
ಉಕ್ಕುಡ ಪಬ್ಲಿಕ್ ಸ್ಕೂಲ್ ಪ್ರಧಾನ ಕಾರ್ಯದರ್ಶಿ ಹನೀಫ್ ಕುದ್ದುಪದವು, ಸಂಚಾಲಕ ಅಬೂಬಕರ್ ಟೆಲಿಫೋನ್, ಉಪಾಧ್ಯಕ್ಷ ಅಬ್ಬಾಸ್ ಕಲ್ಲಂಗಳ, ಕೋಶಾಧಿಕಾರಿ ಅನ್ವರ್ ಉಕ್ಕುಡ, ಜತೆ ಕಾರ್ಯದರ್ಶಿ ಮುನೀರ್ ದರ್ಬೆ, ಸದಸ್ಯರಾದ ಸಿದ್ದೀಕ್ ಆಲಂಗಾರು, ಮಹಮ್ಮದ್ ಟಿ.ಕೆ., ಅಬ್ದುಲ್ಲಕುಂಞಿ ಹಾಜಿ ಬಿ.ಕೆ., ಮಸೀದಿ ಜತೆ ಕಾರ್ಯದರ್ಶಿ ಡಿ.ಎಂ. ಅಬ್ದುಲ್ ರಹಿಮಾನ್ ದರ್ಬೆ, ಎಂ.ಫ್ರೆಂಡ್ಸ್ ಎನ್ನಾರೈ ಸದಸ್ಯ ಹಾರಿಸ್ ಕಾನತ್ತಡ್ಕ ಉಪಸ್ಥಿತರಿದ್ದರು. ಶಿಕ್ಷಕಿ ರಶೀದಾ ಬೇಗಮ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಆರಿಫಾ ವಂದಿಸಿದರು. ಶಿಕ್ಷಕಿ ದಿವ್ಯಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಜ್ಯೋತ್ಸ್ನಾ, ಪವಿತ್ರ, ಆಬಿದಾ, ಪರಮೇಶ್ವರಿ ಸಹಕರಿಸಿದರು.