- Advertisement -
- Advertisement -
ಉಳ್ಳಾಲ (ದಕ್ಷಿಣ ಕನ್ನಡ): ಇಲ್ಲಿನ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಬೆಳಿಗ್ಗೆ ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ, ಪಜೀರು ಸೇನೆರೆಬೈಲು ಶ್ಯಾಮಪ್ರಸಾದ್ (45) ಮೃತಪಟ್ಟಿದ್ದಾರೆ.
ಅವರು ಮಂಗಳೂರಿನಿಂದ ವಾಪಸ್ ಬರುವ ಸಂದರ್ಭದಲ್ಲಿ ರಿಕ್ಷಾ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ. ಆಗ ರಿಕ್ಷಾದಿಂದ ಚಾಲಕ ಹೊರಗೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದೆ. ಅಸೈಗೋಳಿಯ ತಂಗುದಾಣದಲ್ಲಿ ಅವರು ರಿಕ್ಷಾವನ್ನು ಬಾಡಿಗೆಗೆ ನಿಲ್ಲಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.
- Advertisement -