Monday, June 30, 2025
spot_imgspot_img
spot_imgspot_img

ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!

- Advertisement -
- Advertisement -

ಉಳ್ಳಾಲ: ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆ ಪರಿಣಾಮ ಬೆಂಕಿ ಹಿಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಮೃತಪಟ್ಟ ಮಹಿಳೆಯನ್ನು ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರ ಎಂದು ಗುರುತಿಸಲಾಗಿದೆ.

ಮುತ್ತಲಿಬ್ ಎಂಬವರ ಪತ್ನಿ ಖುಬ್ರ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಕಳೆದ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಿಂದ ಈ ಘಟನೆ ನಡೆದಿದೆ. ಇದರಿಂದ ಮನೆಯೊಡತಿ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮಹದಿಯಾ,ಮಝಿಯಾ,ಮಾಯಿಝಾ ಗಂಭೀರ ಗಾಯಗೊಂಡಿದ್ದರು.

ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮನೆಯೊಡತಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!