Wednesday, July 22, 2026
spot_imgspot_img
spot_imgspot_img

ಉಳ್ಳಾಲ:15 ವರ್ಷಗಳಿಂದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

- Advertisement -
- Advertisement -

ಉಳ್ಳಾಲ: ವ್ಯಕ್ತಿಯೋರ್ವರು15 ವರ್ಷ ಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಪುತ್ರ ಶಫೀಕುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಕೋಟೆಕಾರು ಗ್ರಾಮದ ದೇರಳಕಟ್ಟೆ ಪನೀರ್ ನಿವಾಸಿ ಜೆ.ಎಮ್.ಇಸ್ಮಾಯಿಲ್ (68) ಎಂದು ಗುರುತಿಸಲಾಗಿದೆ.

ಇಸ್ಮಾಯಿಲ್ (68) ರವರು 15 ವರ್ಷ ಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಪುತ್ರ ಶಫೀಕುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇಸ್ಮಾಯಿಲ್ ಅವರು ಮನೆ ಬಿಟ್ಟು ಹೋದರೆ 6 ತಿಂಗಳಿಗೊಮ್ಮೆ ಅಥವಾ 1 ವರ್ಷಕ್ಕೊಮ್ಮೆ ಹಿಂದಿರುಗಿ ಮನೆಗೆ ಬರುತ್ತಿದ್ದರು. ಆದರೆ 2010 ಫೆಬ್ರುವರಿ 08 ರಂದು ಮನೆ ಬಿಟ್ಟು ಹೋದ ಅವರು ವಾಪಸ್‌ ಮನೆಗೆ ಬಾರದೆ ಕಳೆದ 15 ವರ್ಷದಿಂದ ನಾಪತ್ತೆ ಆಗಿದ್ದಾರೆ. ಅವರನ್ನು ನಾವು ಮತ್ತು ಸಂಬಂಧಿಕರು ಸೇರಿಕೊಂಡು ಕೇರಳ, ತಮಿಳುನಾಡು, ಆಂಧ್ರ ಸಹಿತ ವಿವಿಧ ಕಡೆಗಳಲ್ಲಿ ಸಂಚರಿಸಿ ಪತ್ತೆಗೆ ಪ್ರಯತ್ನಿಸಿದರೂ ಅವರು ಪತ್ತೆಯಾಗಿರುವುದಿಲ್ಲ. ತನ್ನ ತಂದೆಯನ್ನು ಪತ್ತೆ ಮಾಡಿಕೊಡಬೇಕು ಎಂದು ಪುತ್ರ ಶಫೀಕುದ್ದೀನ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!