Saturday, June 28, 2025
spot_imgspot_img
spot_imgspot_img

ಉಳ್ಳಾಲ: ಆ. 20 ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರು: ಉಳ್ಳಾಲದಿಂದ ನಾಪತ್ತೆಯಾಗಿದ್ದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂಬವರ ಮೃತದೇಹ ಇಂದು ಬೆಳಗ್ಗೆ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಹನೀಫ್ ಆ. 20 ರಂದು ಕಾಣೆಯಾಗಿದ್ದರು. ಇವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು.

ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಆ. 20ರಂದು ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು ಎನ್ನಲಾಗಿದೆ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ ಬಳಿ ಹಫೀಝ್‌ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅದರಂತೆ ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದರು. ಇಂದು ಶವ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

- Advertisement -

Related news

error: Content is protected !!