Sunday, June 29, 2025
spot_imgspot_img
spot_imgspot_img

ಉಳ್ಳಾಲ: ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾದ ಯುವತಿ

- Advertisement -
- Advertisement -

ಉಳ್ಳಾಲ: ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ಯುವತಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಂಪಲ ಬಲ್ಯದ ಹರ್ಷಿತಾ (21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ. ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ನೇಣುಹಾಕಿಕೊಂಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿ ಪ್ರಿಯಕರ ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಇಂದು ಬೆಳಿಗ್ಗೆ ಹರ್ಷಿತಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಮೃತ ಹರ್ಷಿತಾ ಪೋಷಕರ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಅವರು ಐದು ವರುಷಗಳ ಹಿಂದೆ ಕನ್ನಡಿ (ಕಂದಡಿ) ಹಾವು ಕಡಿದು ಅಸುನೀಗಿದ್ದರು. ಹರ್ಷಿತಾ ತಾಯಿ ಗೀತಾ ಅವರನ್ನು ಅಗಲಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!