- Advertisement -
- Advertisement -





ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಲು ತೆರಳಿದ್ದ ವ್ಯಕ್ತಿಯೋರ್ವರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹರೇಕಳ ಬೈತಾರ್ ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಎಂದು ಗುರುತಿಸಲಾಗಿದೆ.
ಮನೆಯಿಂದ ಪಂಪವೆಲ್ ಕಡೆಗೆ ಕೆಲಸದ ಮೇಲೆ ತೆರಳಿದ್ದ ವಿನೋದ್ ಮಧ್ಯಾಹ್ನ ವೇಳೆ ವಾಪಾಸ್ಸಾಗಿದ್ದು, ಬಳಿಕ ನದಿ ನೀರಿಗೆ ಇಳಿದು ಕಪ್ಪೆ ಚಿಪ್ಪು ಹೆಕ್ಕಲು ತೆರಳಿದ್ದರು.
ಈ ವೇಳೆ ಕೆಸರಿನಲ್ಲಿ ಕಾಲು ಹೂತು ಹೋಗಿದ್ದು, ಬಳಿಕ ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ ಪುತ್ರ ನನ್ನು ಅಗಲಿದ್ದಾರೆ.
- Advertisement -