Sunday, June 29, 2025
spot_imgspot_img
spot_imgspot_img

ಉಳ್ಳಾಲ: ದುಬೈಯಲ್ಲಿ ರಸ್ತೆ ಅಪಘಾತ; ಉಳ್ಳಾಲದ ಯುವತಿ ಮೃತ್ಯು..!

- Advertisement -
- Advertisement -

ಉಳ್ಳಾಲ: ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ಮೃತಪಟ್ಟ ಘಟನೆ ದುಬೈಯಲ್ಲಿ ನಡೆದಿದೆ.

ಮೃತಪಟ್ಟ ಯುವತಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂದು ಗುರುತಿಸಲಾಗಿದೆ.

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

ಬಳಿಕ 2019ರಲ್ಲಿ ದುಬೈಗೆ ತೆರಳಿ ಎಕ್ಸ್‍ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ‌ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ದುಬೈನಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ತಂದೆ ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.

- Advertisement -

Related news

error: Content is protected !!