- Advertisement -
- Advertisement -



ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆಗೆ ಪ್ರತಿಕಾರವಾಗಿ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್ ನನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಮೀರ್ನ ಹತ್ಯೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆ. ಇಲ್ಯಾಸ್ ಪತ್ನಿಯ ಸಹೋದರ ಮೊಹಮ್ಮದ್ ನೌಷದ್ ಈ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಇಂತಹ ಸಹಚರರು ಸಮೀರ್ ಹತ್ಯೆ ಮಾಡಿರುವುದು ದೃಢಪಟ್ಟಿದೆ. ನೌಷದ್ ಗೆ ನಾಟೇಕಲ್ನ ನಿಯಾಝ್, ಬಜಾಲ್ನ ತನ್ವೀರ್, ಪಡುಬಿದ್ರೆಯ ಇಕ್ಬಾಲ್ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ.
ಇನ್ನು ಇಲ್ಯಾಸ್ ಹತ್ಯೆಗೆ ಪ್ರತಿಕಾರವಾಗಿ ಈ ಹತ್ಯೆ ಮಾಡಲಾಗಿದೆ. ತಾಯಿಯೊಂದಿಗೆ ಸಮೀರ್ ಮನೆಗೆ ತೆರಳುವಾಗ ಆತನನ್ನು ಕಾರಿನಲ್ಲಿ ಬಂದಿದ್ದ ಅಪರಿಚಿತರ ತಂಡ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.
- Advertisement -