- Advertisement -
- Advertisement -
ಉಳ್ಳಾಲ: ರಸ್ತೆಯಲ್ಲಿದ್ದ ಹೊಂಡದ ಮೇಲಿಂದ ಸ್ಕೂಟರ್ ಚಲಿಸುತ್ತಿದ್ದಾಗ ಹಿಂಬದಿಯಲ್ಲಿ ಕುಳಿತ್ತಿದ್ದ ಸವಾರ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟ ಘಟನೆ ಕೆ.ಸಿ.ರೋ ಡ್ ಸಮೀಪದ ಪಂಜಳ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ. ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮಹಿಳೆ ಮಂಜೇಶ್ವರ ತುಮಿನಾಡು ನಿವಾಸಿ ಜಮೀಳ(40) ಎನ್ನಲಾಗಿದೆ.
ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ರಾತ್ರಿ ತನ್ನ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ಸವಾರನಿಗೆ ಅರಿವಿಲ್ಲದೆ ಪಂಜಳ ಬಳಿಯ ಬೃಹತ್ ಹೊಂಡದ ರಸ್ತೆಯಲ್ಲಿ ಚಲಿಸಿದ್ದಾನೆ. ಪರಿಣಾಮವಾಗಿ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ರಸ್ತೆಗೆಸೆಯಲ್ಪಟ್ಟು, ಗಂಭೀರ ಸ್ಥಿತಿಯಲ್ಲಿದ್ದರು. ತಕ್ಷಣವೇ ಮಹಿಳೆಯನ್ನು ಆಟೋ ರಿಕ್ಷಾದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -