Tuesday, May 7, 2024
spot_imgspot_img
spot_imgspot_img

ಉಳ್ಳಾಲ: ಸರಣಿ ಅಪಘಾತ; ಕಾರು ಚಾಲಕ ಅಪಾಯದಿಂದ ಪಾರು

- Advertisement -G L Acharya panikkar
- Advertisement -

ಉಳ್ಳಾಲ: ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ.ಇದರಿಂದಾಗಿ ಹಿಂಬದಿಯಲ್ಲಿದ್ದ ಲಾರಿ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿ ನಿಂತದನ್ನು ಕಂಡು ಬ್ರೇಕ್‌ ಹಾಕಿದೆ.

ಈದೇ ವೇಳೆ ವ್ಯಾಗನರ್ ಕಾರಿನ ಹಿಂಭಾಗದಲ್ಲಿದ್ದ ಬಂದ ಕೇರಳ ಸಾರಿಗೆ ಬಸ್ಸು ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!