Saturday, April 27, 2024
spot_imgspot_img
spot_imgspot_img

ಉಳ್ಳಾಲ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ!

- Advertisement -G L Acharya panikkar
- Advertisement -

ಉಳ್ಳಾಲ: ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಅಂಬ್ಲಮೊಗರುವಿನ ಪ್ರತಿಷ್ಟಿತ ಪಡ್ಯಾರ ಮನೆ ಗುತ್ತಿನ ನಿತಿನ್ ಶೆಟ್ಟಿ (34) ಎನ್ನಲಾಗಿದೆ.

ಮೃತ ವ್ಯಕ್ತಿ ನಿತಿನ್ ಅವರು ಅಂಬ್ಲಮೊಗರು ಗ್ರಾಮ ಪಂಚಾಯತಿನಲ್ಲಿ ಗ್ರಾಮಕರಣಿಕರ ಸಹಾಯಕರಾಗಿದ್ದರು. ಇಂದು ಬೆಳಗ್ಗೆ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಕುತ್ತಾರಿನವರೆಗೆ ಕೆಲಸಕ್ಕೆ ಬಿಟ್ಟು ಬಂದಿದ್ದರು. ಬಳಿಕ ಮನೆಗೆ ಬಂದ ನಿತಿನ್ ಮೇಲ್ಮಹಡಿಯ ಬೆಡ್ ರೂಮಿನೊಳಗೆ ಹೋಗಿದ್ದರೆನ್ನಲಾಗಿದೆ.

ಬೆಳಗ್ಗೆ ತಾಯಿ ‘ಮಗ ಚಹಾ ಕುಡಿಯಲು ಏಕೆ ಬಂದಿಲ್ಲವೆಂದು ರೂಮಿನೊಳಗೆ ಹೋಗಿ ನೋಡಿದಾಗ ನಿತಿನ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ನಿತಿನ್ ಅವರು ನೆಲೆಸಿದ್ದ ಮನೆಯ ಕೆಳ ಅಂತಸ್ತಿನಲ್ಲಿ ಅಣ್ಣ , ಅತ್ತಿಗೆ ಅವರ ಎರಡು ಮಕ್ಕಳು ವಾಸವಿದ್ದರು. ಅವರ ತಂದೆ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು.

ಮೃತ ನಿತಿನ್ ಅವರು ತಾಯಿ, ಪತ್ನಿ, ಹಾಗೂ ಮೂರು ಸಹೋದರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!