- Advertisement -
- Advertisement -

ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39)
ಇವರಿಗೆ ಸ್ಥಳೀಯ ತಂಡದ ಸದಸ್ಯ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಸ್ಥಳೀಯ ತಂಡದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು.
ಈ ಸಂಬಂಧ ಇಂದು ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಪಟಾಕಿ ಸಿಡಿಸಿದ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ವೈರಲ್ ಆಗಿದೆ. ಈ ಬ್ಗಗೆ ಉಳ್ಳಾಲ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
- Advertisement -