- Advertisement -
- Advertisement -
ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆ ಮಹಾಲಕ್ಷ್ಮಿ ಲೇಔಟ್ ನಿವಾಸಿ ಆಶಾರಾಣಿ (60) ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ ಶ್ರೀರಂಗಪಟ್ಟಣಕ್ಕೆ ಹೋಗಲೆಂದು ವೃದ್ಧೆ ಮನೆಯಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಾಲಕ್ಷ್ಮಿ ಲೇಔಟ್ ಮೆಟ್ರೋ ನಿಲ್ದಾಣ ಬಳಿ ರಸ್ತೆ ದಾಟುವಾಗ ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಹೋಗಿದೆ. ವಾಹನ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ವೃದ್ಧೆ ಮೃತಪಟ್ಟಿದ್ದಾರೆ. ರಾಜಾಜಿನಗರದ ಫೋರ್ಟಿಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು, ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ತನಿಖೆಯಿಂದ ಡಿಕ್ಕಿಯಾದ ವಾಹನ ಯಾವುದೆಂದು ತಿಳಿದು ಬರಬೇಕಿದೆ.
- Advertisement -