Saturday, May 4, 2024
spot_imgspot_img
spot_imgspot_img

ಉಪ್ಪಿನಂಗಡಿ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿ ಗ್ರಾಮದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉರೆಜಾಲು ನಿವಾಸಿ ಜೋಜು ಜೋಸೆಫ್(35ವ.)ಎಂಬವರು ಕಾಣೆಯಾಗಿರುವ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದಾಗ ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು.

ಇವರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್‌ರವರಿಗೆ ರಾತ್ರಿ 9 ಗಂಟೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದಾಗ ಈ ದಿನ ಕೆಲಸಕ್ಕೆ ಬಂದಿರುವುದಿಲ್ಲ, ಸಂಜೆ ಆತ ಹಣ ಬೇಕೆಂದು ಕೇಳಿದಾಗ ನಾನು ಆತನಿಗೆ ನೆಲ್ಯಾಡಿಗೆ ಬರ ಹೇಳಿದ್ದು ಅವನು ಸಂಜೆ 6 ಗಂಟೆಗೆ ನೆಲ್ಯಾಡಿಗೆ ಬಂದು ಹಣ ಪಡೆದು ಹೋಗಿರುವುದಾಗಿ ಮೇಸ್ತ್ರಿ ತಿಳಿಸಿರುತ್ತಾರೆ.

ಬಳಿಕ ಮಗನ ಬಗ್ಗೆ ಸಂಬಂಧಿಕರ ಮನೆಯಲ್ಲಿ ಹಾಗೂ ಇತರ ಕಡೆಗಳಲ್ಲಿ ಹುಡುಕಾಡಿದರೂ ಈ ತನಕ ಪತ್ತೆಯಾಗಿರುವುದಿಲ್ಲ. ಆದುದರಿಂದ ಕಾಣೆಯಾದ ಮಗನನ್ನು ಪತ್ತೆ ಹಚ್ಚಿ ಕೊಡುವಂತೆ ಜೋಜು ಜೋಸೆಫ್ ಅವರ ತಂದೆ ಟಿ.ವಿ.ಜೋಸೆಫ್‌ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!