Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಗಂಭೀರ ಗಾಯ..!

- Advertisement -
- Advertisement -

ಉಪ್ಪಿನಂಗಡಿ: ಕೆಎಸ್ಆರ್‌ಟಿಸಿ ಬಸ್ಸೊಂದು ಓವರ್‍ ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಸವಾರನ ಮೇಲೆ ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯ ಅಂಬೆಲದ ಬಳಿ ಇಂದು ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ವಿನೋದರ (57) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಓವರ್‍ ಟೇಕ್ ಮಾಡುವ ಭರದಲ್ಲಿ ಬೈಕ್‍ಗೆ ತಾಗಿದ್ದು, ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ.

ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್ ಸವಾರನ ಕೈಯ ಮೇಲೆ ಬಸ್‍ನ ಹಿಂಬದಿ ಚಕ್ರ ಹರಿದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!