- Advertisement -
- Advertisement -
ಉಪ್ಪಿನಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಶಿವರಾಮಕೋಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಶಿವರಾಮಕೋಡಿ ನಿವಾಸಿ ನಾರಾಯಣ ಮೂಲ್ಯ (63) ಎಂದು ಗುರುತಿಸಲಾಗಿದೆ.
ಕಳೆದೆರಡು ವರ್ಷಗಳಿಂದ ದೇಹಾರೋಗ್ಯ ಕುಸಿದು ಮಾನಸಿಕ ವೇದನೆಗೆ ತುತ್ತಾಗಿದ್ದ ಇವರು ಮನೆಯಂಗಳದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾರೆಂದು ಮೃತರ ಪತ್ನಿ ಕೆ ಸುಂದರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -