Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ : ಅಕ್ರಮ ಜಾನುವಾರು ಸಾಗಾಟ ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸರು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಅಕ್ರಮ ಜಾನುವಾರು ಸಾಗಾಟವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿ, ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ನಡೆದಿದೆ.

ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಬಂದರು ಗ್ರಾಮದ ಮೈರೋತ್ತಡ್ಕ ನಿವಾಸಿ ರಕ್ಷಿತ್ (25) ಎಂದು ಹೆಸರಿಸಲಾಗಿದೆ. ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಕೆಎ21 ಬಿ8892 ನೋಂದಣಿ ಸಂಖ್ಯೆಯ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಠಾಣಾ ಪಿಎಸ್ಸೆ ಭರತ್ ಕುಮಾರ್ ವಿ ಅವರ ನೇತೃತ್ವದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪಿಕಪ್ ವಾಹನವನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಮೂರು ಜಾನುವಾರುಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ತುಂಬಿರುವುದು ಕಂಡು ಬಂದಿದೆ. ಆರೋಪಿ ರಕ್ಷಿತ್ ನಲ್ಲಿ ಜಾನುವಾರುಗಳ ಬಗ್ಗೆ ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಅವುಗಳನ್ನು ಕಡಿದು ಮಾಂಸ ಮಾಡಲು ಸಾಗಾಟ ಮಾಡುವುದಾಗಿ ತಿಳಿಸಿರುತ್ತಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 57/2024, ಕಲಂ 5,7, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸಾ ತಡೆ ಕಾಯ್ದೆ ಮತ್ತು 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!