Thursday, April 25, 2024
spot_imgspot_img
spot_imgspot_img

ಉಪ್ಪಿನಂಗಡಿ :ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆ- ಕ್ಯಾನ್ ಹಿಡಿದು ಬಂದು ನೂಕುನುಗ್ಗಲು !

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ 34ನೇ ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿ ಡೀಸೆಲ್ ತುಂಬಿದ್ದ ಟ್ಯಾಂಕರೊಂದು ಚಕ್ರ ಕಳಚಿದ ಪರಿಣಾಮ ಮಗುಚಿ ಬಿದ್ದ ಘಟನೆ ಶನಿವಾರ ನಡೆದಿದೆ.

ಘಟನೆಯಲ್ಲಿ ಟ್ಯಾಂಕರ್ ಚಾಲಕ ಮಹೇಶ್ ಸಣ್ಣಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಕೋಲಾರ ಕ್ಕೆ ಹೋಗುತ್ತಿದ್ದ ಟ್ಯಾಂಕರ್ ಬೊಳ್ಳಾರು ಬಳಿ ಮುಂಭಾಗದ ಗಾಲಿಗಳೆರಡು ಕಳಚಿಕೊಂಡ ಕಾರಣ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು.

ಟ್ಯಾಂಕರ್ ಮಗುಚಿಬಿದ್ದರೂ ಸುಮಾರು ಅರ್ಧ ಘಂಟೆಗಳ ಪೊಲೀಸರು ಸ್ಥಳಕ್ಕೆ ಬಾರದ ಕಾರಣ ಸ್ಥಳಿಯರು ಮತ್ತು ವಾಹನ ಚಾಲಕರು ಡೀಸಲ್ ತುಂಬಿಸಲು ಆರಂಭಿಸಿದ್ದರು. ಪರಿಣಾಮ ಸ್ಥಳದಲ್ಗಲಿ ನೂಕು ನುಗ್ಗಲು ಉಂಟಾಗಿತ್ತು. ನಂತರ ಸ್ಥಳಕ್ಕೆ ಬಂದ ಉಪ್ಪಿನಂಗಡಿ ಪೊಲೀಸರು ಡೀಸಲ್ ತುಂಬಿಸಿದ ಸ್ಥಳೀಯರಿಗೆ, ವಾಹನ ಚಾಲಕರಿಗೆ ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದರು.

- Advertisement -

Related news

error: Content is protected !!