- Advertisement -
- Advertisement -
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರ ಪೆರಿಯಶಾಂತಿಯಲ್ಲಿ ಬೆಂಗಳೂರಿನ ಕೋವಿಡ್ ಲ್ಯಾಬ್ ಗೆ ತೆರಳುತ್ತಿದ್ದ ಟಾಟಾ ಸುಮೋ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಸುಮೋ ಚಾಲಕ ಲೀಲಾಧರ್ ಅಲ್ಪ ಗಾಯದಿಂದ ಪಾರಾಗಿದ್ದಾರೆ.
ಆರೋಗ್ಯ ಮತ್ತಯ ಕುಟುಂಬ ಕಲ್ಯಾಣ ಇಲಾಖೆಗೆ ಸೇರಿದ ಟಾಟಾ ಸುಮೋ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಈ ವೇಳೆ ಪೆರಿಯಶಾಂತಿ ಬಳಿ ಮುಖಾಮುಖಿ ಢಿಕ್ಕಿಯಾಗಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -