Sunday, June 29, 2025
spot_imgspot_img
spot_imgspot_img

ಉಪ್ಪಿನಂಗಡಿ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ಎರಡು ದೋಣಿ, ಒಂದು ಹಿಟಾಚಿ ವಶಕ್ಕೆ

- Advertisement -
- Advertisement -

ಉಪ್ಪಿನಂಗಡಿ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮರಳುಗಾರಿಕೆಗೆ ಬಳಸಿದ ಎರಡು ದೋಣಿ ಹಾಗೂ ಒಂದು ಹಿಟಾಚಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ಬಳಿಯ ಹೊಸಮೊಗ್ರು ಎಂಬಲ್ಲಿ ನಡೆದಿದೆ.

ಹೊಸಮೊಗ್ರು ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಡ್ರಿಜ್ಜಿಂಗ್ ಯಂತ್ರ ಬಳಸಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ಸಂದರ್ಭ ಅಲ್ಲಿ ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ್ದ ಎರಡು ದೋಣಿ ಹಾಗೂ ಒಂದು ಹಿಟಾಚಿ ಮತ್ತು ಡ್ರಿಜ್ಜಿಂಗ್ ಯಂತ್ರವನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!