Tuesday, July 21, 2026
spot_imgspot_img
spot_imgspot_img

ಉಪ್ಪಿನಂಗಡಿ : ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರ ಮೃತ್ಯು

- Advertisement -
- Advertisement -

ಉಪ್ಪಿನಂಗಡಿ: ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ.

ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!