Thursday, April 25, 2024
spot_imgspot_img
spot_imgspot_img

ಉಪ್ಪಿನಂಗಡಿ: ವಾಟ್ಸಪ್ ನಲ್ಲಿ ರಾಮ ಮಂದಿರದ ಸ್ಟೇಟಸ್ – ಹಿಂದೂ ಯುವಕನ ಮನೆಗೆ ತೆರಳಿ ಗೂಂಡಾಗಿರಿ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ವಾಟ್ಸಪ್ ನಲ್ಲಿ ರಾಮ ಮಂದಿರ ನಿರ್ಮಾಣದ ಸ್ಟೇಟಸ್ ಹಾಕಿದ ಕಾರಣಕ್ಕಾಗಿ ಹಿಂದೂ ಯುವಕನ ಮನೆಗೆ ತೆರಳಿ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಉಪ್ಪಿನಂಗಡಿಯ ಆದರ್ಶ ನಗರದಲ್ಲಿ ನಡೆದಿದೆ.

ಉಪ್ಪಿನಂಗಡಿ ಆದರ್ಶನಗರ ನಿವಾಸಿ ಮುಕುಂದು ತನ್ನ ವಾಟ್ಸಪ್ ನಲ್ಲಿ ರಾಮ ಮಂದಿರ ನಿರ್ಮಾಣದ ಸ್ಟೇಟಸ್ ಹಾಕಿದ್ದರು. ಈ ಕಾರಣಕ್ಕಾಗಿ ತಡರಾತ್ರಿ ಆತನ ಮನೆಗೆ ತೆರಳಿ ಮನೆಯಲ್ಲಿರುವ ಮಹಿಳೆಯರನ್ನು ಲೆಕ್ಕಿಸದೆ ಆವರಣದಲ್ಲಿರುವ ಗೇಟ್ ಬಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿಯಬೇಕಾಗಿದೆ.

- Advertisement -

Related news

error: Content is protected !!