Friday, March 29, 2024
spot_imgspot_img
spot_imgspot_img

ಉಪ್ಪಿನಂಗಡಿ: ಲಾರಿಗಳ ಮುಖಾಮುಖಿ ಡಿಕ್ಕಿ- ಲಾರಿ ಚಾಲಕ ಮೃತ್ಯು!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಲಾರಿಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ಸಿಂಗೊಡನಹಳ್ಳಿ ಎಂ.ಎಚ್.ಪುರ ನಿವಾಸಿ ವೆಂಕಟೇಶ್ ಎಂಬವರ ಪುತ್ರ ಚೇತನ್ ಎಂ.ವಿ. (22) ಮೃತಪಟ್ಟ ದುರ್ದೈವಿ.

ಹಾಸನ ಕಡೆಯಿಂದ ಮಂಗಳೂರಿನತ್ತ ಚಲಾಯಿಸುತ್ತಿದ್ದ ಲಾರಿಗೆ ಎದುರಿನಿಂದ ಬಂದ ಲಾರಿಯೊಂದು ಕೋಲ್ಪೆ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದ ಸದ್ದು ಕೇಳಿ ಅಲ್ಲಿಗೆ ಬಂದ ಸ್ಥಳೀಯರು ಅಪಘಾತದಿಂದ ಜಖಂಗೊಂಡಿದ್ದ ಲಾರಿಯಲ್ಲಿ ಸಿಲುಕಿಕೊಂಡು ಗಂಭೀರ ಗಾಯಗೊಂಡಿದ್ದ ಚೇತನ್ ಅವರನ್ನು ಪ್ರಯಾಸದಿಂದ ಲಾರಿಯಿಂದ ಹೊರತೆಗೆದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!