Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ರಾತ್ರಿ ಊಟ ಮಾಡಿ ಮಲಗಿದ್ದ ಯುವತಿ ಮಧ್ಯರಾತ್ರಿ ನಾಪತ್ತೆ

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಾರ್ಯದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ(19) ಎಂಬಾಕೆ ನ.19ರಂದು ಮಧ್ಯರಾತ್ರಿಯಿಂದ ನಾಪತ್ತೆಯಾಗಿರುವ ಯುವತಿ.

ತನ್ನ ಎಂಟು ಮಕ್ಕಳ ಪೈಕಿ ಐದು ಮಂದಿ ಹೆಣ್ಣು ಮಕ್ಕಳಾಗಿದ್ದು, ಇವರ ಪೈಕಿ ಕೊನೆಯವಳಾದ ಸಾಹೀದಾ ಶನಿವಾರ ರಾತ್ರಿ ಊಟ ಮಾಡಿ ಮಲಗಿದಾಕೆ ತಡ ರಾತ್ರಿ 1 ಗಂಟೆ ಸುಮಾರಿಗೆ ಎದ್ದು ನೋಡಿದಾಗ ನಾಪತ್ತೆಯಾಗಿರುವುದು ಕಂಡು ಬಂದಿರುತ್ತದೆ. ಈಕೆಗೆ ಕಳೆಂಜಿಬೈಲಿನ ಮುದಾಸೀರ್ ಎಂಬಾತನೊಂದಿಗೆ ಮೊಬೈಲ್ ಸಂಪರ್ಕ ಇದ್ದು , ಆತನೊಂದಿಗೆ ಹೋಗಿರುವ ಸಂಶಯವಿದೆ ಎಂದು ಅಬ್ದುಲ್ ಖಾದ್ರಿಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಪತ್ತೆಯಾದ ಯುವತಿಯು ಎಲ್ಲಿಯಾದರೂ ಪತ್ತೆಯಾದರೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದ್ದಾರೆ.

- Advertisement -

Related news

error: Content is protected !!