ಮನೆಯಲ್ಲಿ ಮದುವೆ ವಿಚಾರದಲ್ಲಿ ನಡೆದ ಸಣ್ಣ ಜಗಳ ಅಣ್ಣ-ತಂಗಿಯ ಇಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂದೀಪ್ (23) ಮತ್ತು ನಂದಿನಿ (19) ಎಂದು ಗುರುತಿಸಲಾಗಿದೆ.
ನಂದಿನಿಯ ಮದುವೆ ವಿಚಾರದಲ್ಲಿ ಮನೆಯಲ್ಲಿ ಗಲಾಟೆ ನಡೆದಿತ್ತು. ಅದರಲ್ಲೂ ಮುಖ್ಯವಾಗಿ ಮನೆಯವರು ಹೇಳಿದ್ದ ಹುಡುಗನನ್ನು ಮದುವೆ ಮಾಡಿಕೊಳ್ಳುವ ವಿಚಾರದಲ್ಲಿ ನಂದಿನಿ ಆಕ್ಷೇಪ ವ್ಯಕ್ತಪಡಿಸಿದ್ದಳು.ಮಾತಿಗೆ ಮಾತು ಬೆಳೆದು ಸಿಟ್ಟುಗೊಂಡ ನಂದಿನಿ ಮನೆಯಿಂದ ಹೊರಗೆ ಓಡಿಹೋಗಿ ಬಾವಿಗೆ ಹಾರಿದ್ದಳು. ಇದನ್ನೂ ನೋಡಿದ ಸಹೋದರ ಸಂದೀಪ್ ಆಕೆಯನ್ನು ಬೆನ್ನು ಹತ್ತಿ ಹೋಗಿದ್ದ.
ಆದರೆ, ಆತನಿಗೆ ಅವಳನ್ನು ತಡೆಯಲು ಸಾಧ್ಯವಾಗಲಿಲ್ಲ. ಏನು ಮಾಡಬೇಕು ಎಂದು ತೋಚದೆ ಆತನೂ ಬಾವಿಗೆ ಹಾರಿದ್ದಾನೆ.ಕೊನೆಗೆ ಈಜು ಬಾರದೆ ಅಣ್ಣ ತಂಗಿ ಇಬ್ಬರೂ ಬಾವಿಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಊರಿನವರು ಆಗಮಿಸಿ ಶವಗಳನ್ನು ಮೇಲೆತ್ತಿದ್ದಾರೆ. ಈ ಘಟನೆಯ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.