Thursday, March 28, 2024
spot_imgspot_img
spot_imgspot_img

ಮದುವೆಗೆ ವಿರೋಧ – ಪ್ರೇಮಿಗಳಿಬ್ಬರು ಆತ್ಮಹತ್ಯೆ!

- Advertisement -G L Acharya panikkar
- Advertisement -

ಉತ್ತರ ಕನ್ನಡ: ಮದುವೆಗೆ ಮನೆಯಲ್ಲಿ ಸಮ್ಮತಿ ಸಿಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆ ಫಾಲ್ಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಬೊಮ್ಮನಕೊಡ್ಲುವಿನ ವಿಕ್ರಮ ಮಾವಿನಕುರ್ವೆ (28) ಹಾಗೂ ತೆರಕನಹಳ್ಳಿಯ ಮೇಘನಾ ನಾಯ್ಕ (27) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ನಾಲ್ಕೈದು ದಿನಗಳ ಹಿಂದೆ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!