Saturday, June 28, 2025
spot_imgspot_img
spot_imgspot_img

ವಾಲ್ಮೀಕಿ ನಿಗಮದ ಹಣ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಕೆ; ಇ.ಡಿ..!

- Advertisement -
- Advertisement -

ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರಕ್ಕೂ, ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೂ ನಂಟು ಇರುವುದು ಪತ್ತೆಯಾಗಿದೆ ಎಂದು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲ ಯ (ಇ.ಡಿ) ಸೋಟಕ ಮಾಹಿತಿ ನೀಡಿದೆ.

ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಮಾಡಲಾದ ಹಣವನ್ನು ಲೋಕಸಭಾ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಸಿರುವುದು ಕಂಡು ಬಂದಿದೆ ಎಂದು ಇ.ಡಿ. ಬಿಡುಗಡೆ ಮಾಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೆ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ, ವಾಲ್ಮೀಕಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಿದ ವೇಳೆ, ಅಕ್ರಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿರುವ ಕುರಿತೂ ದಾಖಲೆಗಳು ಸಿಕ್ಕಿವೆ ಎಂದು ಇ.ಡಿ. ಮಾಹಿತಿ ನೀಡಿದೆ.

ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಕುರಿತ ಪ್ರಕರಣದ ತನಿಖೆ ವೇಳೆ, 90 ಕೋಟಿ ರು. ಹಣವನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದ 18 ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿರುವುದು ಕಂಡುಬಂದಿದೆ. ಹೀಗೆ ವರ್ಗ ಮಾಡಿದ ಹಣವನ್ನು ಆ ರಾಜ್ಯಗಳಲ್ಲಿ ಮತ್ತೆ ಹಲವು ನಕಲಿ ಖಾತೆಗಳಿಗೆ ಹಂಚಲಾಗಿತ್ತು. ಹೀಗೆ ಹಂಚಿದ ಹಣವನ್ನು ಆರೋಪಿಗಳು ಹಂಚಿಕೊಂಡಿದ್ದಾರೆ ಮತ್ತು ಚಿನ್ನ ಖರೀದಿಗೆ ಬಳಸಿರುವುದು ಕಂಡುಬಂದಿದೆ. ಅಲ್ಲದೆ ಲೋಕಸಭಾ ಚುನಾವಣೆಗೂ ಮುನ್ನ ಮದ್ಯ ಖರೀದಿಗೆ ಹಣ ಬಳಸಲಾಗಿದೆ. ಅಲ್ಲದೆ ಅಕ್ರಮವಾಗಿ ವರ್ಗ ಮಾಡಿಕೊಂಡ ಹಣವನ್ನು ಲ್ಯಾಂಬೋರ್ಗಿನಿಯಂಥ ಐಷಾರಾಮಿ ಕಾರು ಖರೀದಿಗೂ ಬಳಸಲಾಗಿದೆ ಎಂದು ಇ.ಡಿ. ಮಾಹಿತಿ ನೀಡಿದೆ.

ಈ ಮಾಹಿತಿ, ಪ್ರಕರಣದಲ್ಲಿ ಪಕ್ಷದ ಯಾವುದೇ ಸಚಿವರು, ಶಾಸಕರು ಭಾಗಿಯಾಗಿಲ್ಲ ಎಂದು ವಾದಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಇರುಸು ಮುರಸು ಉಂಟುಮಾಡಿದೆ.

- Advertisement -

Related news

error: Content is protected !!