Thursday, May 2, 2024
spot_imgspot_img
spot_imgspot_img

ಅಗಲಿದ ಸಹ ಕಲಾವಿದ ವೇದಂ ಬಾಲಯ್ಯರವರ ಕುಟುಂಬಕ್ಕೆ ಸಂತಾಪ ಸೂಚಿಸಿದ ನಟಿ ಅನುಷ್ಕಾ ಶೆಟ್ಟಿ

- Advertisement -G L Acharya panikkar
- Advertisement -

ಸಾಮಾನ್ಯವಾಗಿ ಸ್ಟಾರ್ ನಟ, ನಟಿಯರು ತಮ್ಮ ಜೊತೆ ಸಿನಿಮಾ ಮಾಡಿದ ಸಹ ಕಲಾವಿದರನ್ನು ನೆನಪಿಸಿಕೊಳ್ಳುವುದು ಅಪರೂಪ. ಅವರು ಎಲ್ಲೇ ಸಿಕ್ಕರೂ ಗುರುತಿಸಿ ಅವರೊಂದಿಗೆ ಆತ್ಮೀಯತೆಯಿಂದ ಮಾತನಾಡುವವರು ಇನ್ನೂ ಅಪರೂಪ. ಆ ಅಪರೂಪದ ಪಟ್ಟಿಗೆ ಸೇರುವ ಕರ್ನಾಟಕದ ನಟಿ, ಟಾಲಿವುಡ್ ಸ್ವೀಟಿ ಅನುಷ್ಕಾ ಶೆಟ್ಟಿ ಕೂಡಾ ಒಬ್ಬರು. ಕನ್ನಡಭಿಮಾನ ತೋರಿಸಿ ಕನ್ನಡಿಗರ ಮನಗೆದ್ದ ಚೆಲುವೆ ಅನುಷ್ಕಾ ಶೆಟ್ಟಿ.


ಕೆಲವು ದಿನಗಳ ಹಿಂದೆ ವಯೋಸಹಜ ಕಾಯಿಲೆಯಿಂದ ತಮ್ಮ ಸಹ ಕಲಾವಿದ ವೇದಂ ಬಾಲಯ್ಯ ನಿಧನ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಜೊತೆ ಫೋಟೋ ಹಂಚಿಕೊಂಡಿರುವ ಅನುಷ್ಕಾ ಕಂಬನಿ ಮಿಡಿದಿದ್ದಾರೆ.


‘ವೇದಂ ನಾಗಯ್ಯ ಆತ್ಮ ಪರಿಶುದ್ದವಾದದ್ದು ಇಂದು ಅವರು ಸ್ವರ್ಗಕ್ಕೆ ಸೇರಿದ್ದಾರೆ. ಅವರ ಕುಟುಂಬದವರಿಗೆ ನನ್ನ ಸಂತಾಪ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ’ ಎಂದು ಅನುಷ್ಕಾ ಬರೆದುಕೊಂಡಿದ್ದಾರೆ. ತೆಲುಗು ಚಿತ್ರರಂಗದಿಂದ ಹಲವರು ಸಂತಾಪ ಸೂಚಿಸಿಲ್ಲ ಆದರೆ ಅನುಷ್ಕಾ ಮಾಡಿರುವುದಕ್ಕೆ ನೀವು ನಿಜವಾದ ಕಲಾವಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.


ವೇದಂ ಸಿನಿಮಾ ಸಿದ್ದತೆ ವೇಳೆ ನಿರ್ದೇಶಕ ಕ್ರಿಶ್ ರಸ್ತೆಯಲ್ಲಿ ನಡೆದುಕೊಂದು ಹೋಗುತ್ತಿದ್ದ ನಾಗಯ್ಯನವರನ್ನು ಸಂಪರ್ಕಿಸಿ ತಮ್ಮ ಕಛೇರಿಗೆ ಭೇಟಿ ನೀಡುವಂತೆ ಮನವಿ ಮಾಡಿಕೊಂಡರು. ಚಿತ್ರಕಥೆ ಹೇಳಿ ನಾಗಯ್ಯನಿಗೆ ಸಿನಿಮಾದಲ್ಲಿ ಅಭಿನಯಿಸಲು ಅವಕಾಶ ನೀಡಿದ್ದರು. ನಾಗಯ್ಯ ಅವರ ಮೊದಲ ಸಿನಿಮಾ ವೇದಂ ಆಗಿದ್ದ ಕಾರಣ ಎಲ್ಲರೂ ಅವರನ್ನು ವೇದಂ ನಾಗಯ್ಯ ಎಂದೇ ಕರೆಯುತ್ತಿದ್ದರು.

- Advertisement -

Related news

error: Content is protected !!