- Advertisement -
- Advertisement -
ಮಂಗಳೂರು(ನ.2):- ಮಂಗಳೂರು ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡಿನಲ್ಲಿ ಆಶ್ರಯ ಯೋಜನೆಯಡಿ ನಿರ್ಮಾಣವಾಗುವ ವಸತಿ ಸಮುಚ್ಚಯಕ್ಕೆ ಗುರುತಿಸಿರುವ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ದಿವಾಕರ್ ಪಾಂಡೇಶ್ವರ, ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು,ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಜಗದೀಶ್ ಶೆಟ್ಟಿ ಬೋಳೂರು, ಪೂರ್ಣಿಮಾ, ಸ್ಥಳೀಯ ಮನಪಾ ಸದಸ್ಯೆ ಚಂದ್ರಾವತಿ ವಿಶ್ವನಾಥ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -