Sunday, June 29, 2025
spot_imgspot_img
spot_imgspot_img

ಬಿಜೆಪಿ ರಾಜ್ಯಾಧ್ಯಕ್ಷ ಶೀಘ್ರ ಕೊರೊನಾದಿಂದ ಮುಕ್ತರಾಗಲು ,ಶಾಸಕ‌ ಕಾಮತ್ ಹಾಗೂ ಜಿಲ್ಲಾಧ್ಯಕ್ಷ ಸುದರ್ಶನ್  ನೇತೃತ್ವದಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆ.

- Advertisement -
- Advertisement -

ಮಂಗಳೂರು: ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಶೀಘ್ರ ಗುಣಮುಖರಾಗಲು ಬಿಜೆಪಿ‌ ದ.ಕ.ಜಿಲ್ಲಾ ಸಮಿತಿಯಿಂದ ಮಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಪೂಜೆ.

ಶಾಸಕ‌ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರ ನೇತೃತ್ವದಲ್ಲಿ ನಗರದ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಾಲಯ, ಕುದ್ರೋಳಿ‌ ಶ್ರೀ ಗೋಕರ್ಣನಾಥ ದೇವಾಲಯ, ಗರೋಡಿ ಶ್ರೀ ಬ್ರಹ್ಮಬೈದ್ಯರ್ಕಳ ಕ್ಷೇತ್ರ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ ನೆರವೇರಿಸಲಾಯಿತು.

ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿ ‌ದಾಖಲಾಗಿದ್ದಾರೆ. ಆದ್ದರಿಂದ ಶಾಸಕರು, ಬಿಜೆಪಿಯ ಪ್ರಮುಖರು ಹಾಗೂ ಕಾರ್ಯರ್ತರೆಲ್ಲರೂ ನಗರದ ಪ್ರಮುಖ ದೇವಾಲಯಗಳಲ್ಲಿ ಅವರು ಶೀಘ್ರ ಗುಣಮುಖರಾಗಲು ಭಕ್ತಿಯಿಂದ ಪ್ರಾರ್ಥನೆ ಮಾಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮನಪಾ ಮೇಯರ್ ದಿವಾಕರ ಪಾಂಡೇಶ್ವರ, ಮಂಗಳೂರು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಬಿಜೆಪಿ ವಕ್ತಾರ ಮೋನಪ್ಪ ಭಂಡಾರಿ, ಮಂಗಳೂರು ಮನಪಾ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಶಕೀಲಾ ಕಾವ, ಪೂರ್ಣಿಮಾ ಭಟ್, ಮನೋಹರ್ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಿದ್ದರು.

- Advertisement -

Related news

error: Content is protected !!