Friday, April 26, 2024
spot_imgspot_img
spot_imgspot_img

ವೀರಕಂಭ: ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆ

- Advertisement -G L Acharya panikkar
- Advertisement -

ವೀರಕಂಭ: ಕೋವಿಡ್ ನಿರ್ಮೂಲನೆಯೇ ನಮ್ಮ ಮೊದಲ ಆದ್ಯತೆಯಾಗಿದ್ದು ರಾಜಕೀಯ ಮಾಡದೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ವರ್ತಿಸಿ. ಗ್ರಾಮ ಪಂಚಾಯತಿನ ಜೊತೆ ಸಹಕಾರ ನೀಡಬೇಕು ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಹೇಳಿದರು.

ಅವರು ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರಾದ ವೀರಕಂಭ ವ್ಯಾಪ್ತಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕಿಯರು ಹಾಗೂ ಪಂಚಾಯತಿನ ಇಬ್ಬರು ಸಿಬ್ಬಂದಿಗಳಿಗೆ ಪಂಚಾಯತ್ ವತಿಯಿಂದ ರೈನ್ ಕೋಟು ಹಾಗೂ ಮಾಸ್ಕ್ ವಿತರಿಸಿ ಮಾತನಾಡಿದರು.

ಪಂಚಾಯತ್ ವ್ಯಾಪ್ತಿಯ ಪ್ರತಿ ವಾರ್ಡಿನ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿರುವ ಅಂಗಡಿಗಳನ್ನು ಜಿಲ್ಲಾಡಳಿತ ನೀಡಿದ ಸಮಯಕ್ಕನುಗುಣವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹಾಗೂ ಹೊರರಾಜ್ಯ ಹೊರಜಿಲ್ಲೆಗಳಿಂದ ಬಂದ ನಾಗರಿಕರ ಬಗ್ಗೆ ಮಾಹಿತಿಯನ್ನು ನೀಡುವುದರ ಜೊತೆಗೆ ತಮ್ಮ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ 45 ವರ್ಷ ಮೇಲ್ಪಟ್ಟು ಲಸಿಕೆ ಹಾಕಲು ಬಾಕಿ ಇರುವ ನಾಗರಿಕರನ್ನು ಗುರುತಿಸಿ ಲಸಿಕೆ ಹಾಕಿಸುವ ಜವಾಬ್ದಾರಿಯನ್ನು ನೀಡಲಾಯಿತು. ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶೀಲಾ ವೇಗಸ್, ಪಿ‌.ಡಿ.ಒ. ಗಿರಿಜಾ ಪಿ., ಗ್ರಾಮ ಕರಣಿಕ ಕರಿಬಸಪ್ಪ, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!