Sunday, June 29, 2025
spot_imgspot_img
spot_imgspot_img

ಚಾಲಕ ನಿರ್ಲಕ್ಷ್ಯಕ್ಕೆ ವಾಹನ ಪಲ್ಟಿ; ಯುವಕ ಸಾವು..!

- Advertisement -
- Advertisement -

ಬೊಲೆರೋ ವಾಹನ ಪಲ್ಟಿಯಾದ ಪರಿಣಾಮ ಯುವಕನೊರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರಿನ ಯಾಪಲದಿನ್ನಿ ಬಳಿಯ ನಡೆದಿದೆ.

ಮೃತಪಟ್ಟ ಯುವಕ ಆಂಜನೇಯ (23) ಎಂದು ಗುರುತಿಸಲಾಗಿದೆ.

ಚಂದ್ರಬಂಡಾ ಗ್ರಾಮದ ಆಂಜನೇಯ ಸೇರಿ ಮೂವರು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದಾಗ ಒಮ್ಮೆಲೆ ಪಲ್ಟಿ ಹೊಡೆದಿದೆ. ಬೊಲೆರೋ ಅಡಿ ಸಿಲುಕಿದ್ದ ಆಂಜನೇಯನಿಗೆ ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ನಾಗರಾಜ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಲಕ ವಿರೇಶ್ ಎಂಬಾತ ನಿರ್ಲಕ್ಷಕ್ಕೆ ಈ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಬೊಲೆರೋ ವಾಹನದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಕಬ್ಬಿಣದ ವಸ್ತುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ. ಹೀಗಾಗಿ ಭರಕ್ಕೆ ನಿಯಂತ್ರಣ ತಪ್ಪಿ ವಾಹನವು ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ರಾಯಚೂರು ಎಸ್‌ಪಿ ನಿಖಿಲ್.ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿದ್ದ ಕಬ್ಬಿಣದ ಕಂಬಗಳನ್ನು , ವಾಹನವನ್ನು ತೆರವು ಮಾಡಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!