Thursday, July 3, 2025
spot_imgspot_img
spot_imgspot_img

ಬೆಳ್ತಂಗಡಿ: ಬೈಕ್ ಮುಖಾಮುಖಿ ಡಿಕ್ಕಿ: ಒರ್ವ ಸ್ಥಳದಲ್ಲೇ ಸಾವು

- Advertisement -
- Advertisement -

ವೇಣೂರು: ಎರಡು ಬೈಕ್ ಗಳ ನಡುವಿನ ಮುಖಾಮುಖಿ ಢಿಕ್ಕಿಯ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊರ್ವ ಗಾಯಗೊಂಡಿರುವ ಘಟನೆ ಮೂಡಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ ಎದುರುಗುಡ್ಡೆ ನಿವಾಸಿ ರವೀಂದ್ರ ಪೂಜಾರಿ (35) ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿದ್ದ ಸಹೋದರ ರಾಜೇಂದ್ರ ಪೂಜಾರಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಮನೆಯಲ್ಲಿ ಪರೊಟಾ ತಯಾರಿಸಿ ವಿವಿಧೆಡೆಗೆ ಮಾರಾಟ ಮಾಡುವ ವೃತ್ತಿ ಹೊಂದಿದ್ದ ಇವರು ಸೋಮವಾರ ಮೂಡಬಿದಿರೆ ಕಡೆಗೆ ತನ್ನ ದ್ವಿಚಕ್ರ ವಾಹನದಲ್ಲಿ ಸಹೋದರನನ್ನು ಕೂರಿಸಿ ಮೂಡಬಿದಿರೆ ಕಡೆಗೆ ಹೋಗುತ್ತಿದ್ದಾಗ ಕೊಡಂಗಲ್ಲು ಸಮೀಪ ಎದುರುಗಡೆಯಿಂದ ಬಂದ ಬೈಕ್ ಢಿಕ್ಕಿಯೊಡೆಯಿತು ಎನ್ನಲಾಗಿದೆ. ಮೃತರು ತಂದೆ, ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ. ಮೃತ ರವೀಂದ್ರ ಪೂಜಾರಿಯವರ ಎರಡು ಕಣ್ಣುಗಳನ್ನು ಮನೆಯವರು ಸ್ವಇಚ್ಚೆಯಿಂದ ದಾನ ಮಾಡಲು ನಿರ್ಧರಿಸಿದ್ದು, ಈ ಮೂಲಕ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

vtv vitla
- Advertisement -

Related news

error: Content is protected !!