








ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಸಂತ್ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು.
ವಸಂತ ನಾಡಿಗೇರ ಅವರು ಮೂಕಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದರು. ವಸಂತ ನಾಡಿಗೇರ್ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.