- Advertisement -
- Advertisement -
ವಿಟ್ಲ: ಕಡಂಬು ಎಂಬಲ್ಲಿ ಹಿಂದೂ ಯುವತಿಗೆ ಜೊತೆ ಅನ್ಯಮತೀಯ ವ್ಯಕ್ತಿ ಕನ್ಯಾನ ಅಬೂಬಕ್ಕರ್ ಎಂಬಾತ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಪ್ರಕರಣವನ್ನು ಸರಗಳ್ಳತನ ಎಂದು ಬಿಂಬಿಸುವ ಪ್ರಯತ್ನವನ್ನು ಸಮಾಜ ವಿರೋಧಿ ಶಕ್ತಿಗಳಿಂದ ಮಾಡಲಾಗಿತ್ತು.
ಈ ಪ್ರಕರಣವನ್ನು ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಖಂಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು. ಇದರ ಹಿನ್ನೆಲೆಯಲ್ಲಿ ಎಚ್ಚೆತ್ತು ಕೊಂಡ ಪೊಲೀಸ್ ಇಲಾಖೆ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ತಕ್ಷಣ ಬಂಧಿಸಿರುತ್ತಾರೆ. ವಿಟ್ಲ ಠಾಣೆಯ ಪೊಲೀಸರ ಕೆಲಸಕ್ಕೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.
- Advertisement -