Thursday, April 25, 2024
spot_imgspot_img
spot_imgspot_img

 ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರೈಲ್ವೆ ಹಳಿಯಲ್ಲಿ ಅವರ ರುಂಡ ಮುಂಡ ಬೇರ್ಪಟ್ಟ ದೇಹ ಪತ್ತೆಯಾಗಿದೆ.ಇವರು ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು.

ಅವರು ಪತ್ನಿ ಮಮತಾ, ಮಗ ಸೋನಾಲ್, ಮಗಳು ಸೋನಾಲಿ ಅವರನ್ನ ಅಗಲಿದ್ದಾರೆ.

ಸಖರಾಯಪಟ್ಟಣದಿಂದ ಖಾಸಗಿ ಡ್ರೈವರ್ ಜೊತೆ ಕಾರಿನಲ್ಲಿ ಹೋಗುತ್ತಿದ್ದ ಅವರು ಸಂಜೆ 6:30ಕ್ಕೆ ಕಡೂರು ತಾಲೂಕು ಗುಣಸಾಗರ ಬಳಿ ಕಾರು ನಿಲ್ಲಿಸಿದ್ದಾರೆ. ಸ್ವಲ್ಪ ಕೆಲಸ ಇದ್ದು ಹೋಗಿ ಬರುತ್ತೇನೆ ಎಂದು ಹೇಳಿ ಹೋದರೆನ್ನಲಾಗಿದೆ. ಆದರೆ, ರಾತ್ರಿ 2 ಗಂಟೆಗೆ ಅವರ ಛಿದ್ರಗೊಂಡ ಮೃತದೇಹ ಸಿಕ್ಕಿದೆ. ಹೆಚ್ಚಿನ ವಿವರಗಳು ಬರಬೇಕಿದೆ.

- Advertisement -

Related news

error: Content is protected !!