ಕಾರ್ಯಕರ್ತರ ಪ್ರತೀ ಹೆಜ್ಜೆಯಲ್ಲೂ ಅವರ ಜೊತೆ ನಿಲ್ಲುತ್ತೇನೆ- ಕಿಶೋರ್ ಕುಮಾರ್






ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರು ಅಕ್ಟೋಬರ್ 3 ಗುರುವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಸೇರಿ ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಟಿವಿ ಜೊತೆ ಮಾತನಾಡಿದ ಕಿಶೋರ್ ಕುಮಾರ್ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ ವಿವಿಧ ಜವಬ್ದಾರಿಗಳನ್ನು ನಾನು ಪಕ್ಷ ನಿಷ್ಠೆಯಿಂದ ನಿಭಾಯಿಸಿದ್ದೇನೆ. ಇನ್ನು ಮುಂದೆಯೂ ಹಿರಿಯರ ಮಾರ್ಗದರ್ಶನ ಪಡೆದು ಸಾಮಾನ್ಯ ಕಾರ್ಯಕರ್ತರ ಪ್ರತೀ ಹೆಜ್ಜೆಯಲ್ಲೂ ಅವರೊಂದಿಗೆ ನಿಂತು ನನ್ನ ಜವಬ್ದಾರಿಯನ್ನು ನಿಭಾಯಿಸುತ್ತೇನೆ ಎಂದು ತಿಳಿಸಿದರು.
ಕಿಶೋರ್ ಕುಮಾರ್ ಪುತ್ತೂರುರವರು ಇಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಸಂಘದ ಹಿರಿಯರನ್ನು ಭೇಟಿ ನೀಡಿದರು.