- Advertisement -
- Advertisement -
ಬೆಂಗಳೂರು: ಪಂಚಮಸಾಲಿ ಸಮುದಾಯದ ಮುಖಂಡರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಬೆನ್ನಲ್ಲೆ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಮಾಡಲಾಗಿದೆ. ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಆದೇಶ ಹೊರಡಿಸಿದ್ದಾರೆ.
2ಎ ಮೀಸಲಾತಿಗಾಗಿ ಆಗ್ರಹಿಸಿರೋ ಪಂಚಮಸಾಲಿ ಸಮುದಾಯದ ಮುಖಂಡರು ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದಾರೆ. ಸಮಾವೇಶ ಮುಗಿಯುವ ವೇಳೆಗೆ ಮೀಸಲಾತಿ ಕುರಿತ ಸಿಹಿಸುದ್ದಿ ನೀಡಬೇಕೆಂದು ಗಡುವು ಕೊಟ್ಟಿದ್ದಾರೆ.
ಒಂದು ವೇಳೆ ಮೀಸಲಾತಿ ನೀಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಇಂದಿನಿಂದ ನಾಳೆ ಅಂದರೆ ಫೆ.22ರ ಮಧ್ಯರಾತ್ರಿವರೆಗೆ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
- Advertisement -